22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತ್ತು ಭವಿಷ್ಯದ ಮತದಾರರಿಗೆ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ. ಪಂ.ನ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ಶ್ರೀ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಹಾಗೂ ಬಹು ಮುಖ್ಯವಾಗಿ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮದಲ್ಲಿ “ಯುವ ಮತದಾರರು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ನೈತಿಕ ಮತದಾನಕ್ಕೆ ಪ್ರಾಮುಖ್ಯತೆ ಕೊಡಬೇಕು. ಜೊತೆಯಲ್ಲಿ ಏ.26 ರ ದಿನ ಮನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿದ್ದರೂ /ಮದುವೆ ಇತರೆ ಸಂಭ್ರಮದಲ್ಲಿ ಮುಳುಗಿದ್ದರೂ ದೇಶಕ್ಕಾಗಿ, ನಾಡಿಗಾಗಿ, ನಮ್ಮ ಜಿಲ್ಲೆ ಹಾಗೂ ತಾಲೂಕಿನ ಹಿತಕ್ಕಾಗಿ ಅರ್ಥಾತ್ ನಮ್ಮೆಲ್ಲರ ಭವಿಷ್ಯದ ಹಿತಕ್ಕಾಗಿ ಅರ್ಧ/ಒಂದು ಗಂಟೆಯ ಸಮಯವನ್ನು ಮತದಾನ ಮಾಡಿ ಬರಲು ವಿನಿಯೋಗಿಸಬೇಕು” ಎಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸುತ್ತಾ ತಿಳಿಸಿದರು.

Related posts

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya
error: Content is protected !!