July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತ್ತು ಭವಿಷ್ಯದ ಮತದಾರರಿಗೆ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ. ಪಂ.ನ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ಶ್ರೀ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಹಾಗೂ ಬಹು ಮುಖ್ಯವಾಗಿ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮದಲ್ಲಿ “ಯುವ ಮತದಾರರು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ನೈತಿಕ ಮತದಾನಕ್ಕೆ ಪ್ರಾಮುಖ್ಯತೆ ಕೊಡಬೇಕು. ಜೊತೆಯಲ್ಲಿ ಏ.26 ರ ದಿನ ಮನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿದ್ದರೂ /ಮದುವೆ ಇತರೆ ಸಂಭ್ರಮದಲ್ಲಿ ಮುಳುಗಿದ್ದರೂ ದೇಶಕ್ಕಾಗಿ, ನಾಡಿಗಾಗಿ, ನಮ್ಮ ಜಿಲ್ಲೆ ಹಾಗೂ ತಾಲೂಕಿನ ಹಿತಕ್ಕಾಗಿ ಅರ್ಥಾತ್ ನಮ್ಮೆಲ್ಲರ ಭವಿಷ್ಯದ ಹಿತಕ್ಕಾಗಿ ಅರ್ಧ/ಒಂದು ಗಂಟೆಯ ಸಮಯವನ್ನು ಮತದಾನ ಮಾಡಿ ಬರಲು ವಿನಿಯೋಗಿಸಬೇಕು” ಎಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸುತ್ತಾ ತಿಳಿಸಿದರು.

Related posts

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!