37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಕೌಶಲ್ಯದ ಜೊತೆಗೆ ಜೀವನದ ಅನಭವವನ್ನು ಪಡೆದಾಗ ಉತ್ತಮವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ರುಡ್‌ಸೆಟ್ ಸಂಸ್ಥೆಯಲ್ಲಿ ಕೌಶಲ್ಯ ಮಾತ್ರವಲ್ಲದೇ ಜೀವನದ ಮೌಲ್ಯಗಳನ್ನು ಕೂಡ ಕಲಿಸಿಕೊಡುತ್ತಾರೆ. ಇಲ್ಲಿಂದ ಹೋಗುವಾಗ ಜೀವನದ ಅನುಭವವನ್ನು ಜೊತೆಗೆ ಕೊಂಡುಹೋಗಿ. ಪ್ರಕೃತಿಗೆ ನಮ್ಮ ಅಗತ್ಯ ಇಲ್ಲ ಆದರೆ ನಮಗೆ ಪ್ರಕೃತಿಯ ಅಗತ್ಯ ಇದೆ. ಆದ್ದರಿಂದ ಪ್ರಕೃತಿಯನ್ನು ಉಳಿಸುವ ಕೆಲಸ ಮಾಡಿ. ರುಡ್‌ಸೆಟ್ ಸಂಸ್ಥೆಯಲ್ಲಿ ಕಲಿತ ಎಲ್ಲಾ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ನಿರ್ಧಾರ ಮಾಡಿ, ಗ್ರಾಹಕರೊಂದಿಗೆ ಒಳ್ಳೆಯ ರೀತಿಯಲ್ಲಿ ಮಾತನಾಡಿ ನಿಮ್ಮ ಉದ್ಯಮವನ್ನು ಬೆಳೆಸಿಕೊಳ್ಳಿ, ಆರ್ಥಿಕವಾಗಿ ಸಬಲರಾಗಿ, ಅತೀ ಹೆಚ್ಚು ಯುವಕರನ್ನು ಹೊಂದಿರುವ ದೇಶಗಳಲ್ಲಿ ನಮ್ಮ ದೇಶವೂ ಒಂದು, ಈ ಯುವಕರಿಗೆ ಉದ್ಯೋಗವನ್ನು ಕೊಟ್ಟರೆ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರುಡ್‌ಸೆಟ್ ಸಂಸ್ಥೆಯಿಂದ ಅನೇಕ ನಿರುದ್ಯೋಗಿಗಳು ಸ್ವ ಉದ್ಯೋಗವನ್ನು ಕೈಕೊಂಡು ಸ್ವಾವಲಂಬಿಗಳಾಗುವುದು ಅಲ್ಲದೇ ಅನೇಕರಿಗೆ ಉದ್ಯೋಗ ಕೊಡುವವರಾಗಿದ್ದಾರೆ ಎಂದು ಧರ್ಮೋತ್ಥಾನ ಟ್ರಸ್ಟ್, ಧರ್ಮಸ್ಥಳ ಇದರ ಕಾರ್ಯದರ್ಶಿಗಳು ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ಭಾಗವಹಿಸಿ ಶಿಭಿರಾರ್ಥೀಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರರವರು ಅದ್ಯಕ್ಷತೆ ವಹಿಸಿದ್ದರು, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ರವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕ ಕರಣಾಕರ್ ಜೈನ್ ರವರು ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 25 ಅಭ್ಯರ್ಥಿಗಳು ಭಾಗವಹಿಸಿದರು. ಕೆಲವು ಶಿಭಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!