22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್‌ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ಟೆಕ್ನಾಲಜಿ ((ATAST – Tunisia Association for the fu- ture of Science & Technology)) I-FEST TOP 10 WINNER ವತಿಯಿಂದ ನಡೆಸಲಾದ I-FEST ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಟಾಪ್‌ಟೆನ್‌ ಪ್ರೆಸೆಂಟೇಷನ್‌ಗೆ ಅವಕಾಶ ಪಡೆದು ಇದೀಗ ಗ್ರಾಂಡ್ ಗೋಲ್ಡ್ ಮೆಡಲ್ ಬಹುಮಾನಕ್ಕೆ ಭಾಜನರಾಗಿದ್ದಾರೆ. ಟುನಿಷಿಯದಲ್ಲಿ ನಡೆದ ಸಮಾರಂಭದಲ್ಲಿ, ಅಸೋಸಿಯೇಷನ್ ಫಾರ್ ಟೆಕ್ನಾಲಜಿ ಆ್ಯಂಡ್ ಸೈನ್ಸ್ ಟುನಿಷಿಯದ ಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಹೇತಮ್ ಸ್ಲಿಮೇನ್ ಅವರು ಗೋಲ್ಡ್ ಮೆಡಲ್ ಪ್ರದಾನ ಮಾಡಿ ಅಭಿನಂದಿಸಿದರು.

ಆಪ್ತ ಚ೦ದ್ರ ಮತಿ ಇವರು ‘ಕಿಡ್ಡಿ ಸೇಫ್ ಕನೆಕ್ಟ್ (Kiddi Safe Connect)ಎಂಬ ಯೋಜನೆಯನ್ನು, ಮಾ.22ರಿಂದ 28ರವರೆಗೆ ಆಫ್ರಿಕಾದ ಟುನಿಷಿಯದಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಡಿಸಿದ್ದರು. ವಿವೇಕಾನಂದ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯ ಪ್ರಯೋಗಾಲಯದ ಬೋಧಕರಾದ ವೆಂಕಟೇಶ್ ಮತ್ತು ಮಂಗಳೂರಿನ ಟೆಕ್ಕೋಮಸ್ ಸಂಸ್ಥೆಯ ಸ್ಥಾಪಕರಾದ ಅಶ್ವಿನ್ ಕಲ್ಲಾಜೆ ಹಾಗೂ ಶಾಲಾ ವಿಜ್ಞಾನ ಶಿಕ್ಷಕಿ ರಂಜಿತ ಇವರ ಮಾರ್ಗದರ್ಶನದಲ್ಲಿ ಇವರು ಈ ಯೋಜನೆಯನ್ನು ಸಿದ್ಧಪಡಿಸಿದ್ದರು.

ಆಪ್ತಚಂದ್ರಮತಿ ಮುಳಿಯ ಅವರು ಪ್ರತಿಷ್ಠಿತ ಮುಳಿಯ ಜ್ಯುವೆಲ್ಸ್‌ನ ಸಿಎಂಡಿ ಕೇಶವಪ್ರಸಾದ್‌ ಮುಳಿಯ ಹಾಗೂ ಕೃಷ್ಣವೇಣಿ ಪ್ರಸಾದ್‌ ಮುಳಿಯ ದಂಪತಿಯ ಪುತ್ರಿ

Related posts

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!