25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

ಬೆಳ್ತಂಗಡಿ: ಸುಜ್ಞಾನ ಎಂಬ ಹೆಸರಿನಲ್ಲೇ ವಿಶೇಷ ಶಕ್ತಿ ಇದೆ. ಜ್ಞಾನ ಯಾರೂ ಕದಿಯಲಾಗದ, ಖರೀದಿಸಲಾಗದ ಸೊತ್ತು. ಇಲ್ಲಿ ಈಗ ಜ್ಞಾನಾರ್ಜನೆ ಮಾಡುತ್ತಿರುವ ಮಕ್ಕಳು ಮುಂದೆ ಕಲಿತು ಹೋದ ಮೇಲೆ, ಕಲಿತ ಶಾಲೆಯನ್ನು ಮರೆಯದೇ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರು ಸಲಹೆ ನೀಡಿದರು.


ಉಜಿರೆ ಗ್ರಾಮದ ಮಾಚಾರು ಬದನಾಜೆ ಸ.ಉ.ಹಿ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಹಾಗೂ ಸುಜ್ಞಾನ ನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.


ಬದನಾಜೆ ಶಾಲೆಯ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಈ ನಿಟ್ಟಿನಲ್ಲಿ ಮಾದರಿಯಾಗಿದೆ. ಬದನಾಜೆ ಸರಕಾರಿ ಶಾಲೆ ಅಭಿವೃದ್ಧಿ ವೇಗ ಹಿರಿಯ ವಿದ್ಯಾರ್ಥಿಗಳ, ವಿದ್ಯಾಭಿಮಾನಿಗಳ ಸಹಕಾರದಿಂದ ಇನ್ನಷ್ಟು ಪ್ರಗತಿಪಥದಲ್ಲಿ ಸಾಗಬೇಕು. ಸುಜ್ಞಾನ ನಿಧಿ ಶಾಲೆಯ ಪಾಲಿಗೆ ಅಕ್ಷಯನಿಧಿಯಾಗಲಿ ಎಂದು ಹರಸಿದರು.


ಸುಜ್ಞಾನ ನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಉದ್ಯಮಿ ಮೋಹನ್ ಕುಮಾರ್ ಮಾತನಾಡಿ, ಇತ್ತೀಚಿಗೆ ನನ್ನನ್ನು ಭೇಟಿ ಮಾಡುತ್ತಿರುವವರಲ್ಲಿ ಸರಕಾರಿ ಶಾಲೆಗಳ ಶಿಕ್ಷಕರ, ಎಸ್.ಡಿ.ಎಂ.ಸಿ. ಯವರ ಸಂಖ್ಯೆ ಅಧಿಕವಾಗಿದೆ. ಇದುವರೆಗೆ ಬದುಕು ಕಟ್ಟೋಣ ತಂಡದ ಮೂಲಕ 4 ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಆದರೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘದ ಈ ಪರಿಕಲ್ಪನೆ ಮಾದರಿ ಹಾಗೂ ಅಭಿನಂದನೀಯ. ಶಾಲೆಯ ಅಭಿವೃದ್ಧಿಗೆ ಸುಜ್ಞಾನ ನಿಧಿ ಪ್ರಾರಂಭಿಸಿರುವ ಚಿಂತನೆ ರಾಜ್ಯಕ್ಕೆ ಮಾದರಿ. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ಕೈಲಾದ ನೆರವು ನೀಡುವುದಾಗಿ ತಿಳಿಸಿದರು.


ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಮಾತನಾಡಿ, ಮನುಷ್ಯನ ಸಂಪಾದನೆಯನ್ನು ಮೂರೇ ಜನ ಅನುಭವಿಸಬೇಕು. ಒಂದು ಕುಟುಂಬ, ಎರಡನೆಯದು ದಾನದ ಮೂಲಕ ದುರ್ಬಲ ವ್ಯಕ್ತಿಗಳ ಸಬಲೀಕರಣ ಅಥವಾ ಯಾರೋ ತಿಂದು ಮುಗಿಸುವುದು. ಆದ್ದರಿಂದ ಸಂಪದಾನೆಯ ಒಂದಂಶ ಸಮಾಜಮುಖಿಯಾಗಿರಲಿ, ಅದರಲ್ಲೂ ಶಾಲೆಗಳಿಗೆ ಕೊಡುವ ಕೆಲಸ ಆಗಬೇಕು. ರೋಟರಿ ಕ್ಲಬ್‌ನ ಸಹಕಾರ ಶಾಲೆಗೆ ಸದಾ ಇರಲಿದೆ ಎಂದರು.


ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮಾತನಾಡಿ, ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ ಅನೇಕ ಮಂದಿ ರಾಷ್ಟ್ರಮಟ್ಟದಲ್ಲಿ ಮಿಂಚಿದವರಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಉತ್ತೇಜನ ಬೇಕಾಗಿದೆ. ಈ ಮಧ್ಯೆ ಸುಜ್ಞಾನ ನಿಧಿಯಂತ ಯೋಜನೆ ತಾಲೂಕಿನಾದ್ಯಂತ ಸರಕಾರಿ ಶಾಲೆಗಳ ಬೆಳವಣಿಗೆಗೆ ದಾರಿದೀಪವಾಗಲಿ ಎಂದು ಶುಭಹಾರೈಸಿದರು.


ವೇದಿಕೆಯಲ್ಲಿ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ, ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು, ಸುಜ್ಞಾನ ನಿಧಿಯ ಗೌರವ ಸಂಚಾಲಕ ಗಿರಿರಾಜ ಬಾರಿತ್ತಾಯ, ಸಂಚಾಲಕರಾದ ಸಂದರ ಬಂಗೇರ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಲಲಿತಾ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಲಕ್ಷ್ಮಣ ಪೂಜಾರಿ, ಎಸ್.ಕೆ.ಡಿ.ಆರ್.ಡಿ.ಪಿ.ಯ ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅ‘ಕ್ಷರಾದ ಅರವಿಂದ ಕಾರಂತ, ರೋಟರಿ ಕ್ಲಬ್ ಕೋಶಾಧಿಕಾರಿ ಅಬೂಬಕ್ಕರ್ ಯು.ಎಚ್., ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆಯ ಅಧ್ಯಕ್ಷ ಸನತ್ ಕುಮಾರ್ ಪಾಲೆಂಜ, ಸುಜ್ಞಾನ ನಿಧಿ ಸಹ ಸಂಚಾಲಕರಾದ ಸೋಮಶೇಖರ್ ಕೆ., ಪ್ರಗತಿ ಯುವತಿ ಮಂಡಲ ಅಧ್ಯಕ್ಷೆ ಅರುಣಾಕ್ಷಿ ಉಪಸ್ಥಿತರಿದ್ದರು.


ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಸಂಘ ಅಧ್ಯಕ್ಷ ರಾಮಯ್ಯ ಗೌಡ ಪ್ರಸ್ತಾವಿಸಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಸುರೇಶ್ ಮಾಚಾರ್ ನಿರೂಪಿಸಿದರು. ಬದನಾಜೆ ಸ.ಪ್ರೌಢಶಾಲೆ ಶಿಕ್ಷಕಿ ಮೇಧಾ ಕೆ. ವಂದಿಸಿದರು.

Related posts

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!