April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!