23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!