July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!