ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತ್ತು ಭವಿಷ್ಯದ ಮತದಾರರಿಗೆ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ. ಪಂ.ನ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ಶ್ರೀ ವೈಜಣ್ಣ , ಕಾಲೇಜಿನ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್ ,
ತಾ.ಪಂ.ಅಧೀಕ್ಷಕರಾದ ಡಿ. ಪ್ರಶಾಂತ್ ಹಾಗೂ ಬಹು ಮುಖ್ಯವಾಗಿ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಗೃತಿ ಕಾರ್ಯಕ್ರಮದಲ್ಲಿ “ಯುವ ಮತದಾರರು ತಮ್ಮ ಮತ್ತು ತಮ್ಮ ಕುಟುಂಬದ ಸದಸ್ಯರ ನೈತಿಕ ಮತದಾನಕ್ಕೆ ಪ್ರಾಮುಖ್ಯತೆ ಕೊಡಬೇಕು. ಜೊತೆಯಲ್ಲಿ ಏ.26 ರ ದಿನ ಮನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿದ್ದರೂ /ಮದುವೆ ಇತರೆ ಸಂಭ್ರಮದಲ್ಲಿ ಮುಳುಗಿದ್ದರೂ ದೇಶಕ್ಕಾಗಿ, ನಾಡಿಗಾಗಿ, ನಮ್ಮ ಜಿಲ್ಲೆ ಹಾಗೂ ತಾಲೂಕಿನ ಹಿತಕ್ಕಾಗಿ ಅರ್ಥಾತ್ ನಮ್ಮೆಲ್ಲರ ಭವಿಷ್ಯದ ಹಿತಕ್ಕಾಗಿ ಅರ್ಧ/ಒಂದು ಗಂಟೆಯ ಸಮಯವನ್ನು ಮತದಾನ ಮಾಡಿ ಬರಲು ವಿನಿಯೋಗಿಸಬೇಕು” ಎಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸುತ್ತಾ ತಿಳಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!