March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು.

ಉಜಿರೆಯ ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗ ಹಾಗೂ ಉಜಿರೆ ಗ್ರಾ.ಪಂ.ನ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ತಾರಾ ಎಸ್. ಗೌಡ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಮತದಾನ ಮಾಡಲು ಅರ್ಹ ವಯಸ್ಸು, ಮತದಾರರ ಗುರುತಿನ ಚೀಟಿ ಪಡೆಯುವ ವಿಧಾನ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಕೋಟ್ಯಾನ್ ಅವರು ವಿದ್ಯಾರ್ಥಿನಿಯರಿಗೆ ಮತದಾನ ಕುರಿತು ಪ್ರತಿಜ್ಞೆ ಬೋಧಿಸಿದರು. ಮತ ಚಲಾಯಿಸುವುದರ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮೀಣ ಪುನರ್ವಸತಿ ಕೇಂದ್ರದ ಕಾರ್ಯಕರ್ತರಾದ ವಿಫುಲ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿ, ವಂದಿಸಿದರು‌. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya
error: Content is protected !!