July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!