ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya
error: Content is protected !!