30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya
error: Content is protected !!