25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!