July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಅಜ್ಜಿ ಕಥಾ ಪರಂಪರೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ಈಗೀಗ ಮನೆಯಲ್ಲಿ ಅಜ್ಜಿಯರಿದ್ದರೂ ಮಕ್ಕಳಿಗೆ ಕಥೆ ಹೇಳುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya
error: Content is protected !!