July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು.

ಉಜಿರೆಯ ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗ ಹಾಗೂ ಉಜಿರೆ ಗ್ರಾ.ಪಂ.ನ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ತಾರಾ ಎಸ್. ಗೌಡ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಮತದಾನ ಮಾಡಲು ಅರ್ಹ ವಯಸ್ಸು, ಮತದಾರರ ಗುರುತಿನ ಚೀಟಿ ಪಡೆಯುವ ವಿಧಾನ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಕೋಟ್ಯಾನ್ ಅವರು ವಿದ್ಯಾರ್ಥಿನಿಯರಿಗೆ ಮತದಾನ ಕುರಿತು ಪ್ರತಿಜ್ಞೆ ಬೋಧಿಸಿದರು. ಮತ ಚಲಾಯಿಸುವುದರ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮೀಣ ಪುನರ್ವಸತಿ ಕೇಂದ್ರದ ಕಾರ್ಯಕರ್ತರಾದ ವಿಫುಲ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿ, ವಂದಿಸಿದರು‌. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!