30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya
error: Content is protected !!