26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya
error: Content is protected !!