22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya
error: Content is protected !!