24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya
error: Content is protected !!