25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!