23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!