ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Leave a Comment

error: Content is protected !!