September 6, 2026
ಜಿಲ್ಲಾ ಸುದ್ದಿರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ:17- ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಏ.3ರ ಬುಧವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಅವರಿಗೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ರಾರಾಜಿಸಿದ ತುಳುನಾಡ ಧ್ವಜ:
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.

ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್, ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್,

ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ, ಎಂ ಎಲ್ಸಿ‌ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಪ್ರಮುಖರು, ಕಾಯ೯ಕತ೯ರು ಭಾಗಿಯಾದರು. ವಿಶೇಷವಾಗಿ ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿತ್ತು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
error: Content is protected !!