25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
error: Content is protected !!