September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya
error: Content is protected !!