23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನ ಪ್ರೇರಣಾ ಫೌಂಡೇಶನ್ ಕೋರ್ಸ್ ವಿಧ್ಯುಕ್ತವಾಗಿ ಉದ್ಘಾಟನೆ

ಬೆಳ್ತಂಗಡಿ: ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಸಂಸ್ಥೆಯಾದ ವಿದ್ವತ್ ಪಿಯು ಕಾಲೇಜಿನ ಪ್ರೇರಣಾ ಫೌಂಡೇಶನ್ ಕೋರ್ಸ್ ಅನ್ನು ವಿಧ್ಯುಕ್ತವಾಗಿ ಎ.2ರಂದು ಉದ್ಘಾಟಿಸಲಾಯಿತು.
ಸಂಸ್ಥೆಯ ಹಿರಿಯ ಮಾರ್ಗದರ್ಶಕರಾದ ಶ್ರೀಮತಿ ಮತ್ತು ರಾಧಾಕೃಷ್ಣ ರೈ ದಂಪತಿಗಳು ತೆಂಗಿನ ಹಿಂಗಾರದ ದಳಗಳನ್ನ ಅರಳಿಸಿ ಅನಾವರಣಗೊಳಿಸುವುದರ ಮೂಲಕ ಪ್ರೇರಣಾ ಪೌಂಡೇಶನ್ ಕೋರ್ಸ್ ಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ವಿದ್ವತ್ ಆಡಳಿತ ಮಂಡಳಿಯ ಸರ್ವ ಸದಸ್ಯರು ಜ್ಯೋತಿ ಬೆಳಗಿಸಿ, ಜ್ಞಾನದ ಜ್ಯೋತಿ ಸದಾ ಬೆಳಗುವ ವಿಶೇಷ ವಿದ್ಯಾಕೇಂದ್ರವಾಗಿ ವಿದ್ವತ್ ಬೆಳೆಯಲಿ ಎಂದು ಹಾರೈಸಿದರು.
ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ಭಾಷಣ ಮಾತನಾಡುತ್ತಾ, ಸಾಮಾನ್ಯ ವಿದ್ಯಾರ್ಥಿಗಳನ್ನು ಸ್ಪರ್ಧಾಕಾಂಕ್ಷಿಗಳನ್ನಾಗಿ ಪರಿವರ್ತಿಸುವ ಸಾಧಕರ ಮಾದರಿಯ ಪರಿಚಯಿಸಿ, ವಿದ್ವತ್ ಶಿಕ್ಷಣ ಪ್ರತಿಷ್ಠಾನದ ನುರಿತ ಹಾಗೂ ಪರಿಣತ ಉಪನ್ಯಾಸಕರ ಆಯ್ಕೆಯಿಂದ ಹಿಡಿದು ವಿದ್ಯಾರ್ಥಿಗಳಿಗೆ ಸಿಗಬೇಕಾದ ವ್ಯವಸ್ಥೆಯವರೆಗೂ ಪ್ರತಿಯೊಂದನ್ನೂ ಶಿಸ್ತುಬದ್ಧವಾಗಿ ಏ‌ರ್ಪಾಟು ಮಾಡಲಾಗಿದೆ ಎಂದು ನೆರೆದಿದ್ದ ಪೋಷಕ ಸಮುದಾಯಕ್ಕೆ ವಿವರಿಸಿದರು.
ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಇ ಮಂಡಗಳಲೆ ಪಿಯು ಹಂತದ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ ತಿಳಿಸಿ, ವಿದ್ವತ್ ಪಿಯು ಕಾಲೇಜಿನ ಸಮಗ್ರ ತರಬೇತಿ ಮಾದರಿಯ ಸವಿಸ್ತಾರ ಮಾಹಿತಿ ಹಂಚಿಕೊಂಡರು.

ಪೋಷಕರು ತಮ್ಮ‌ಮಕ್ಕಳ ಆಕಾಂಕ್ಷೆಗೆ ತಕ್ಕ ಪಿಯು ಶಿಕ್ಷಣ ಸಂಸ್ಥೆಯೊಂದು ಉದಯಿಸಿದ್ದು, ತಾವು ಅದರ ಪ್ರಕಾಶದ ದಿನಗಳನ್ನ ನೋಡಲು ಉತ್ಸುಕರಾಗಿರುವುದಾಗಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು. ನೀಟ್, ಜೆಇಇ ಯಂತಹಾ ಪರೀಕ್ಷೆಗಳನ್ನ ಎದುರಿಸುವಾಗ ವಿದ್ಯಾರ್ಥಿಗಳು ಒಳಗಾಗುವ ಅಸಾಮಾನ್ಯ ಒತ್ತಡ ನಿವಾರಣೆಗೆ ವಿದ್ವತ್ ಕೌನ್ಸಲಿಂಗ್(,Counselling) , ಸ್ವ ನಿಗದಿತ ಗುರಿ(Self-Target) ಹಾಗೂ ಪ್ರತಿದಿನದ ಗುರಿ ( Daily Target) ನಿಜವಾಗಿಯೂ ರಾಮಬಾಣವಾಗಿವೆ(sure-shot-success) ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ನಂತರ ಉಪನ್ಯಾಸಕರೊಂದಿಗೆ ವಿಶೇಷ ಸಂವಾದ ನಡೆಸಿದ ಮಾರ್ಗದರ್ಶಕ ಹಿತೈಷಿಗಳಾಗಿ ‌ಆಗಮಿಸಿದ್ದ ಬೆಂಗಳೂರಿನ ಪ್ರಸಿದ್ಧ ಸೆಂಟರ್ ಫಾರ್ ಎಕ್ಸಲೆನ್ಸ್ ನ ಆಡಳಿತ ನಿರ್ದೇಶಕ ರಾಮನಾಥ ಆಗರ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ತರಬೇತಿ ಮಾದರಿಯ ಬಗ್ಗೆ ಬಹಳ ಮೆಚ್ವುಗೆ ವ್ಯಕ್ತಪಡಿಸಿ, ಇಂತಹ ಮಾದರಿ ಕರ್ನಾಟಕದ ಯಾವ ಪಿಯು ಕಾಲೇಜಿನಲ್ಲಿಯೂ ಸಮಗ್ರವಾಗಿ ಅಳವಡಿಸಿಕೊಂಡಿಲ್ಲ ಎಂದು ಹೇಳಿ, ವಿದ್ವತ್ ತರಬೇತಿ ಮಾದರಿ ಮುಂಬರುವ ದಿನಗಳಲ್ಲಿ ಕರ್ನಾಟಕದ ಮಾದರಿಯಾದರೂ ಸಂಶಯವಿಲ್ಲ ಎಂದು ಪ್ರಶಂಶಿಸಿದರು.

ಅದಕ್ಕೂ ಮೊದಲು ಸಂಸ್ಥೆಯ ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಕಜೆ ಯವರು ವಿದ್ವತ್ ಪಿಯು ಕಾಲೇಜಿನ ವಿಷಯ ಪರಿಣತ ಉಪನ್ಯಾಸಕರ ಪರಿಚಯ ಮಾಡಿಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರಜ್ವಲ್. ಜೆ ರವರು ಪ್ರಾರ್ಥಿಸಿದರು. ಉಪನ್ಯಾಸಕಿ ಕು: ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

ವಿದ್ವತ್ ಪ್ರೇರಣಾ ಪೌಂಡೇಷನ್ ಕೋರ್ಸ್ ನ CBSE/ICSE ಬ್ಯಾಚ್ -4 ನ‌ ರೆಗ್ಯುಲರ್ ತರ‌ಬೇತಿ ಎ.2 ರಿಂದ ನಡೆಯುತ್ತಿದೆ.ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳ ಪೌಂಡೇಷನ್ ತರಗತಿಗಳು ಏಪ್ರಿಲ್ 15 ರಿಂದ ಪ್ರಾರಂಭವಾಗುತ್ತವೆ.

ವರದಿ: ವಿದ್ವತ್ ನೆಟ್ವರ್ಕ್, ಗುರುವಾಯನಕೆರೆ.

Related posts

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

Suddi Udaya
error: Content is protected !!