22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಅಜ್ಜಿ ಕಥಾ ಪರಂಪರೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ಈಗೀಗ ಮನೆಯಲ್ಲಿ ಅಜ್ಜಿಯರಿದ್ದರೂ ಮಕ್ಕಳಿಗೆ ಕಥೆ ಹೇಳುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya
error: Content is protected !!