September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ವಾಳೆಯ ಗುರಿಕಾರ ವಿಲಿಯಂ ಡಿಸೋಜ, ವಾಳೆಯ ಪ್ರತಿನಿಧಿ ಗಳಾದ ರಾಬರ್ಟ್ ಹಾಗೂ ಮರ್ಲಿನ್ ಡಿಸೋಜ, ಎಸ್.ವಿ.ಪಿ ಅಧ್ಯಕ್ಷ ರಿಚರ್ಡ್ ಡಿಸೋಜ, ಸಮುದಾಯ ಸಂಚಾಲಕ ರೋಶನ್ ಡಿಸೋಜ, ದಾನಿಗಳು, ಪಲಾನುಭವಿಯ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಂತ ಅಂತೋನಿ ಚರ್ಚ್ ವತಿಯಿಂದ ಬಡ ಹಾಗೂ ಅರ್ಹ ಕುಟುಂಬಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಮನೆ ನವೀಕರಣ ಹಾಗೂ ಹೊಸ ಮನೆಗಳನ್ನು ದಾನಿಗಳ ನೆರವಿನಿಂದ ಕಟ್ಟಿಕೊಡುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಈಗಾಗಲೇ ಸುಮಾರು 23 ಲಕ್ಷ ರೂಪಾಯಿ ವೆಚ್ಚದಲ್ಲಿ ನಾಲ್ಕು ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya
error: Content is protected !!