July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!