30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya
error: Content is protected !!