22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya
error: Content is protected !!