23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya
error: Content is protected !!