September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ.

ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್ ಫಾರೂಕ್ ಹಾಗೂ ಅಬ್ದುಲ್ ಅಕ್ರಂ ಬಿನ್ ಉಮ್ಮರ್ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು  ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ. ಗಳಾದ ಶ್ರೀನಾಥ್ ರೆಡ್ಡಿ, ಕಿಶೋರ್, ಎ.ಎಸ್.ಐ. ತಿಮ್ಮಪ್ಪ, ಸಿಬ್ಬಂದಿಗಳಾದ ವೈಭವ್, ದಯಾನಂದ್, ಇಮ್ತಿಯಾಜ್ ಪಾಷಾ ಪಾಲ್ಗೊಂಡಿರುತ್ತಾರೆ.

Related posts

ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಶಾಲಾ ವಿದ್ಯಾರ್ಥಿನಿಯನ್ನು. ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ : ಜೀವಬೆದರಿಕೆ, ಬಟ್ಟೆ ಹರಿದು ಮಾನಕ್ಕೆ ಕುಂದು ಆರೋಪ ವಿದ್ಯಾರ್ಥಿನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!