May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಹತ್ಯಡ್ಕ ಗ್ರಾಮ, ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ, (ಪ್ರಾಯ: 48) ಎಂಬವರ ದೂರಿನಂತೆ, ಎ. 02 ರಂದು ರಾತ್ರಿ, ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿರುವ ಸೀತಾರಾಮ ಮನೆಯ ಅಂಗಳಕ್ಕೆ ನೆರೆಕೆರೆಯ ನಿವಾಸಿ ಆರೋಪಿ ದಿಲೀಪ್‌ ಎಂಬಾತನು ಕೈಯಲ್ಲಿ ಕಬ್ಬಿಣದ ದೊಣ್ಣೆಯನ್ನು ಹಿಡಿದು ಅಕ್ರಮ ಪ್ರವೇಶ ಮಾಡಿ, ಸೀತಾರಾಮ ರವರನ್ನು ಉದ್ದೇಶಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕಲ್ಲೊಂದನ್ನು ಅವರ ಪತ್ನಿಯ ತಲೆಗೆ ಬಿಸಾಡಿ ಜೀವ ಬೆದರಿಕೆ ಹಾಕಿರುತ್ತಾನೆ , ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2024 ಕಲಂ: 447, 504, 324, 506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!