25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಹತ್ಯಡ್ಕ ಗ್ರಾಮ, ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ, (ಪ್ರಾಯ: 48) ಎಂಬವರ ದೂರಿನಂತೆ, ಎ. 02 ರಂದು ರಾತ್ರಿ, ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿರುವ ಸೀತಾರಾಮ ಮನೆಯ ಅಂಗಳಕ್ಕೆ ನೆರೆಕೆರೆಯ ನಿವಾಸಿ ಆರೋಪಿ ದಿಲೀಪ್‌ ಎಂಬಾತನು ಕೈಯಲ್ಲಿ ಕಬ್ಬಿಣದ ದೊಣ್ಣೆಯನ್ನು ಹಿಡಿದು ಅಕ್ರಮ ಪ್ರವೇಶ ಮಾಡಿ, ಸೀತಾರಾಮ ರವರನ್ನು ಉದ್ದೇಶಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕಲ್ಲೊಂದನ್ನು ಅವರ ಪತ್ನಿಯ ತಲೆಗೆ ಬಿಸಾಡಿ ಜೀವ ಬೆದರಿಕೆ ಹಾಕಿರುತ್ತಾನೆ , ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2024 ಕಲಂ: 447, 504, 324, 506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya
error: Content is protected !!