ಬೆಳ್ತಂಗಡಿ: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹಾಗೂ ಇತರರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ಮೊದಲ ಕಾಯ೯ಕತ೯ರ ಬೃಹತ್ ಮೆರವಣಿಗೆ ನಡೆಯಿತು.













