May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

ತೆಂಕಕಾರಂದೂರು: ಫೇಸ್‌ ಬುಕ್‌ ಆಪ್‌ ನಲ್ಲಿ Money View Personal Loan (LTD) ಆಪ್‌ ಮೂಲಕ ಅಪರಿಚಿತರು ಲೋನ್ ಕೊಡುವುದಾಗಿ ಪರಿಚಯಿಸಿಕೊಂಡಿದ್ದು ವಿವಿಧ ಹಂತದಲ್ಲಿ ರೂ 96,743 ನ್ನು ಹಣವನ್ನು‌ ಆನ್ ಲೈನ್ ಮುಲಕ ವರ್ಗಾಯಿಸಿಕೊಂಡಿದ್ದು, ಆರೋಪಿತರು ಸಾಲವನ್ನು ನೀಡದೇ, ಹಣವನ್ನು ಹಿಂತಿರುಗಿಸದೇ ವಂಚಿಸಿರುವ ಘಟನೆ ನಡೆದಿದೆ.

ತೆಂಕಕಾರಂದೂರು ನಿವಾಸಿ ಶ್ರೀಮತಿ ನೆಬಿಸಾ (38) ಎಂಬವರ ದೂರಿನಂತೆ, ಮಾ.21 ರಂದು ಪಿರ್ಯಾದಿದಾರರಿಗೆ ಪೇಸ್‌ ಬುಕ್‌ ಆಪ್‌ ನಲ್ಲಿ Money View Personal Loan (LTD) ಆಪ್‌ ಮೂಲಕ, ಅಪರಿಚಿತ ಆರೋಪಿತರು ಪರಿಚಯಿಸಿಕೊಂಡಿದ್ದು, ನೆಬಿಸಾ ಲೋನ್ ಬಗ್ಗೆ ಆರೋಪಿತರಿಂದ ಮಾಹಿತಿ ಪಡೆದು 5 ಲಕ್ಷ ಲೋನ್‌ ಪಡೆಯುವರೇ ಆರೋಪಿತರಿಗೆ ದಾಖಲೆ ಪತ್ರಗಳನ್ನು ಕಳುಹಿಸಿರುತ್ತಾರೆ.

ಬಳಿಕ ಆರೋಪಿತರು ಪೋನ್‌ ಮೂಲಕ ಸಂಪರ್ಕಿಸಿ, ಮಾ. 28 ರ ತನಕ ವಿವಿಧ ಹಂತದಲ್ಲಿ ಒಟ್ಟು ರೂ 96,743 ನ್ನು ಹಣವನ್ನು‌ ಆನ್ ಲೈನ್ ಮುಲಕ ವರ್ಗಾಯಿಸಿಕೊಂಡಿದ್ದು, ಆರೋಪಿತರು ನೆಬಿಸಾರವರಿಗೆ ಸಾಲವನ್ನು ನೀಡದೇ, ಹಣವನ್ನು ಹಿಂತಿರುಗಿಸದೇ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 35/2024 ಕಲಂ: 66 (C), (D) IT Act & ಕಲಂ: 417,420 IPC ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!