May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಹತ್ಯಡ್ಕ ಗ್ರಾಮ, ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ, (ಪ್ರಾಯ: 48) ಎಂಬವರ ದೂರಿನಂತೆ, ಎ. 02 ರಂದು ರಾತ್ರಿ, ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿರುವ ಸೀತಾರಾಮ ಮನೆಯ ಅಂಗಳಕ್ಕೆ ನೆರೆಕೆರೆಯ ನಿವಾಸಿ ಆರೋಪಿ ದಿಲೀಪ್‌ ಎಂಬಾತನು ಕೈಯಲ್ಲಿ ಕಬ್ಬಿಣದ ದೊಣ್ಣೆಯನ್ನು ಹಿಡಿದು ಅಕ್ರಮ ಪ್ರವೇಶ ಮಾಡಿ, ಸೀತಾರಾಮ ರವರನ್ನು ಉದ್ದೇಶಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕಲ್ಲೊಂದನ್ನು ಅವರ ಪತ್ನಿಯ ತಲೆಗೆ ಬಿಸಾಡಿ ಜೀವ ಬೆದರಿಕೆ ಹಾಕಿರುತ್ತಾನೆ , ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2024 ಕಲಂ: 447, 504, 324, 506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!