July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ.


ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!