28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಝ ಸುಣ್ಣಲಡ್ಡ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಟಾ ಏಸ್‌ ವಾಹನದ ಒಳಗಡೆ ಸುಮಾರು ರೂ 10,000/- ಬೆಲೆ ಬಾಳುವ ನಸು ಹಳದಿ ಬಣ್ಣದ ದನಗಳು-02 ಮತ್ತು ಸುಮಾರು ರೂ 5,000/- ಬೆಲೆ ಬಾಳುವ ಕಪ್ಪು ಬಣ್ಣದ ದನ – 01 ಇದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ರೂ 15,000/- ಆಗಬಹುದು. ಸ್ವಾಧೀನಪಡಿಸಿದ ವಾಹನದ ಅಂದಾಜು ಬೆಲೆ ರೂ 1,50,000/- ಮತ್ತು ಜಾನುವಾರು ಸಾಗಾಟದ ಸಮಯ ಎ ಸ್ಕಾರ್ಟ್ ಮಾಡಿದ ಟಿವಿಎಸ್ ಜುಪಿಟರ್ ಸ್ಕೂಟರಿನ ಅಂದಾಜು ಮೌಲ್ಯ ರೂ 50,000/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ ನಂ 47 /2024 ಕಲಂ: 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಕಲಂ: 11 ಡಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya
error: Content is protected !!