May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಝ ಸುಣ್ಣಲಡ್ಡ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಟಾ ಏಸ್‌ ವಾಹನದ ಒಳಗಡೆ ಸುಮಾರು ರೂ 10,000/- ಬೆಲೆ ಬಾಳುವ ನಸು ಹಳದಿ ಬಣ್ಣದ ದನಗಳು-02 ಮತ್ತು ಸುಮಾರು ರೂ 5,000/- ಬೆಲೆ ಬಾಳುವ ಕಪ್ಪು ಬಣ್ಣದ ದನ – 01 ಇದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ರೂ 15,000/- ಆಗಬಹುದು. ಸ್ವಾಧೀನಪಡಿಸಿದ ವಾಹನದ ಅಂದಾಜು ಬೆಲೆ ರೂ 1,50,000/- ಮತ್ತು ಜಾನುವಾರು ಸಾಗಾಟದ ಸಮಯ ಎ ಸ್ಕಾರ್ಟ್ ಮಾಡಿದ ಟಿವಿಎಸ್ ಜುಪಿಟರ್ ಸ್ಕೂಟರಿನ ಅಂದಾಜು ಮೌಲ್ಯ ರೂ 50,000/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ ನಂ 47 /2024 ಕಲಂ: 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಕಲಂ: 11 ಡಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
error: Content is protected !!