25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಝ ಸುಣ್ಣಲಡ್ಡ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಟಾ ಏಸ್‌ ವಾಹನದ ಒಳಗಡೆ ಸುಮಾರು ರೂ 10,000/- ಬೆಲೆ ಬಾಳುವ ನಸು ಹಳದಿ ಬಣ್ಣದ ದನಗಳು-02 ಮತ್ತು ಸುಮಾರು ರೂ 5,000/- ಬೆಲೆ ಬಾಳುವ ಕಪ್ಪು ಬಣ್ಣದ ದನ – 01 ಇದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ರೂ 15,000/- ಆಗಬಹುದು. ಸ್ವಾಧೀನಪಡಿಸಿದ ವಾಹನದ ಅಂದಾಜು ಬೆಲೆ ರೂ 1,50,000/- ಮತ್ತು ಜಾನುವಾರು ಸಾಗಾಟದ ಸಮಯ ಎ ಸ್ಕಾರ್ಟ್ ಮಾಡಿದ ಟಿವಿಎಸ್ ಜುಪಿಟರ್ ಸ್ಕೂಟರಿನ ಅಂದಾಜು ಮೌಲ್ಯ ರೂ 50,000/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ ನಂ 47 /2024 ಕಲಂ: 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಕಲಂ: 11 ಡಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya
error: Content is protected !!