28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಬೆಳ್ತಂಗಡಿ: ತಣ್ಣೀರುಪಂತದಲ್ಲಿ ಮನೆ ಸಮೀಪದ ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಣ್ಣೀರುಪಂತ ನಿವಾಸಿ ಅಬ್ದುಲ್ ಹಕ್ಕೀಂ ಈ ಬಗ್ಗೆ ದೂರು ನೀಡಿದ್ದು ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ. 3 ರಂದು ಬೆಳಿಗ್ಗೆ ನೋಡಿದಾಗ ಗೋದಾಮಿನ ಬೀಗ ಬಾಗಿಲು ತುಂಡಾಗಿ ಬಿದ್ದಿರುವುದು ಕಂಡು ಬಂದಿದ್ದು ಪರಿಶೀಲಿಸಿದಾಗ ಅಲ್ಲಿ ಇರಿಸಲಾಗಿದ್ದ 25ಅಡಿಕೆ ಚೀಲಗಳನ್ನು ಕಳ್ಳತನ ಮಾಡಿರುವುದು ಕಂಡು ಬಂದಿದೆ. ಕಳ್ಳತನವಾಗಿರುವ ಅಡಿಕೆಯ ಒಟ್ಟು ಮೌಲ್ಯ 1,35,000 ಎಂದು ಅಂದಾಜಿಸಲಾಗಿದೆ.


ಅಡಿಕೆ ಗೋದಾಮಿನ ಬಗ್ಗೆ ಮಾಹಿತಿಯಿರುವ ಸ್ಥಳೀಯರ ಸಹಕಾರದೊಂದಿಗೆ ಈ ಕಳ್ಳತನ ನಡೆದಿದೆ ಎಂದು ಅನುಮಾನಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!