25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಬೆಳ್ತಂಗಡಿ: ತಣ್ಣೀರುಪಂತದಲ್ಲಿ ಮನೆ ಸಮೀಪದ ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಣ್ಣೀರುಪಂತ ನಿವಾಸಿ ಅಬ್ದುಲ್ ಹಕ್ಕೀಂ ಈ ಬಗ್ಗೆ ದೂರು ನೀಡಿದ್ದು ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ. 3 ರಂದು ಬೆಳಿಗ್ಗೆ ನೋಡಿದಾಗ ಗೋದಾಮಿನ ಬೀಗ ಬಾಗಿಲು ತುಂಡಾಗಿ ಬಿದ್ದಿರುವುದು ಕಂಡು ಬಂದಿದ್ದು ಪರಿಶೀಲಿಸಿದಾಗ ಅಲ್ಲಿ ಇರಿಸಲಾಗಿದ್ದ 25ಅಡಿಕೆ ಚೀಲಗಳನ್ನು ಕಳ್ಳತನ ಮಾಡಿರುವುದು ಕಂಡು ಬಂದಿದೆ. ಕಳ್ಳತನವಾಗಿರುವ ಅಡಿಕೆಯ ಒಟ್ಟು ಮೌಲ್ಯ 1,35,000 ಎಂದು ಅಂದಾಜಿಸಲಾಗಿದೆ.


ಅಡಿಕೆ ಗೋದಾಮಿನ ಬಗ್ಗೆ ಮಾಹಿತಿಯಿರುವ ಸ್ಥಳೀಯರ ಸಹಕಾರದೊಂದಿಗೆ ಈ ಕಳ್ಳತನ ನಡೆದಿದೆ ಎಂದು ಅನುಮಾನಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya
error: Content is protected !!