25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಹತ್ಯಡ್ಕ ಗ್ರಾಮ, ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ, (ಪ್ರಾಯ: 48) ಎಂಬವರ ದೂರಿನಂತೆ, ಎ. 02 ರಂದು ರಾತ್ರಿ, ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿರುವ ಸೀತಾರಾಮ ಮನೆಯ ಅಂಗಳಕ್ಕೆ ನೆರೆಕೆರೆಯ ನಿವಾಸಿ ಆರೋಪಿ ದಿಲೀಪ್‌ ಎಂಬಾತನು ಕೈಯಲ್ಲಿ ಕಬ್ಬಿಣದ ದೊಣ್ಣೆಯನ್ನು ಹಿಡಿದು ಅಕ್ರಮ ಪ್ರವೇಶ ಮಾಡಿ, ಸೀತಾರಾಮ ರವರನ್ನು ಉದ್ದೇಶಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕಲ್ಲೊಂದನ್ನು ಅವರ ಪತ್ನಿಯ ತಲೆಗೆ ಬಿಸಾಡಿ ಜೀವ ಬೆದರಿಕೆ ಹಾಕಿರುತ್ತಾನೆ , ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2024 ಕಲಂ: 447, 504, 324, 506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya
error: Content is protected !!