22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ.


ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
error: Content is protected !!