28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

ಪಟ್ರಮೆ : ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ , ಪಟ್ರಮೆ ಗ್ರಾಮ ಪಂಚಾಯತ್, ಸಾರ್ವಜನಿಕ ಗ್ರಂಥಾಲಯ ಇದರ ಸಂಯೋಗದಲ್ಲಿ
ಮತದಾನ ಜಾಗೃತಿ ಕಾರ್ಯಾಗಾರ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆಯಿತು.


ಶ್ರೀರಾಮ ವಿದ್ಯಾ ಸಂಸ್ಥೆ ಪಟ್ಟೂರಿನ ಮುಖ್ಯೋಪಾಧ್ಯಯರಾದ ಚಂದ್ರಶೇಖರ್ ಶೇಟ್, ಪಟ್ರಮೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯ ವಿಭಾಗದ ಗ್ರಂಥ ಪಾಲಕಿಯಾದ ಶ್ರೀಮತಿ ವಿದ್ಯಾ ಸರಸ್ವತಿ ಹಾಗೂ ಶಾಲಾ ಹಂತದ ಮತದಾರ ಸಾಕ್ಷರತಾ ಸಂಘದ ಸಂಚಾಲಕರು (ELC) ಆದ ಸುಪ್ರೀತ ಎ. ಉಪಸ್ಥಿತರಿದ್ದರು.


ಕಾರ್ಯಾಗಾರದಲ್ಲಿ ಚಂದ್ರಶೇಖರ್ ಶೇಟ್ ಮಾತನಾಡಿ ಚುನಾವಣೆ ಮತದಾನ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ ಪ್ರಜ್ಞಾವಂತನಾದ ನಿಜವಾದ ದೇಶದ ಪ್ರಜೆಯು ಚುನಾವಣೆ ದಿನದಂದು ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ದೇಶದ ಪ್ರತಿ ತನ್ನ ಕರ್ತವ್ಯವನ್ನು ಪಾಲಿಸಬೇಕು ಎಂದು ತಿಳಿಸಿದರು. ಮುಂಬರುವ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ 2024ರಲ್ಲಿ ನಮ್ಮ ಗ್ರಾಮದ 18 ವರ್ಷ ಮೇಲ್ಪಟ್ಟ ಎಲ್ಲಾ ಮತದಾನ ಬಾಂಧವರು ಮತದಾನ ಮಾಡುವಂತೆ ಶಾಲಾ ವಿದ್ಯಾರ್ಥಿಗಳು ಪ್ರೇರೇಪಿಸಬೇಕು. 18 ವರ್ಷ ಮೇಲ್ಪಟ್ಟವರ ನಿಮ್ಮ ಮನೆಗಳಲ್ಲಿದ್ದರೆ ಅವರು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಮತ್ತು ಆದ್ಯತೆಯ ಮೇರೆಗೆ ಮತದಾನ ಮಾಡಬೇಕು ಎಂದು ಶಾಲಾ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ನೆರೆಹೊರೆಯ ಮನೆಯವರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಗ್ರಂಥ ಪಾಲಕಿಯಾದ ವಿದ್ಯಾ ಸರಸ್ವತಿ ರವರು ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವ ನಮ್ಮ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ವ್ಯವಸ್ಥೆಯು ಒಂದು ಪ್ರಮುಖವಾದ ಘಟ್ಟವಾಗಿದೆ. ಇದರ ಭಾಗವಾಗಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆಯ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು.. ಅದಕ್ಕಾಗಿ ನಡೆಸುತ್ತಿರುವ ಜಾಗೃತಿ ಅಭಿಯಾನದಲ್ಲಿ ನೀವೆಲ್ಲ ವಿದ್ಯಾರ್ಥಿಗಳು ಪ್ರೇರಕರಾಗಿ ಭಾಗವಹಿಸಿ ಎಂದು ತಿಳಿಸಿದರು.

Related posts

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya
error: Content is protected !!