28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

ಪಟ್ರಮೆ : ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ , ಪಟ್ರಮೆ ಗ್ರಾಮ ಪಂಚಾಯತ್, ಸಾರ್ವಜನಿಕ ಗ್ರಂಥಾಲಯ ಇದರ ಸಂಯೋಗದಲ್ಲಿ
ಮತದಾನ ಜಾಗೃತಿ ಕಾರ್ಯಾಗಾರ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆಯಿತು.


ಶ್ರೀರಾಮ ವಿದ್ಯಾ ಸಂಸ್ಥೆ ಪಟ್ಟೂರಿನ ಮುಖ್ಯೋಪಾಧ್ಯಯರಾದ ಚಂದ್ರಶೇಖರ್ ಶೇಟ್, ಪಟ್ರಮೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯ ವಿಭಾಗದ ಗ್ರಂಥ ಪಾಲಕಿಯಾದ ಶ್ರೀಮತಿ ವಿದ್ಯಾ ಸರಸ್ವತಿ ಹಾಗೂ ಶಾಲಾ ಹಂತದ ಮತದಾರ ಸಾಕ್ಷರತಾ ಸಂಘದ ಸಂಚಾಲಕರು (ELC) ಆದ ಸುಪ್ರೀತ ಎ. ಉಪಸ್ಥಿತರಿದ್ದರು.


ಕಾರ್ಯಾಗಾರದಲ್ಲಿ ಚಂದ್ರಶೇಖರ್ ಶೇಟ್ ಮಾತನಾಡಿ ಚುನಾವಣೆ ಮತದಾನ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ ಪ್ರಜ್ಞಾವಂತನಾದ ನಿಜವಾದ ದೇಶದ ಪ್ರಜೆಯು ಚುನಾವಣೆ ದಿನದಂದು ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ದೇಶದ ಪ್ರತಿ ತನ್ನ ಕರ್ತವ್ಯವನ್ನು ಪಾಲಿಸಬೇಕು ಎಂದು ತಿಳಿಸಿದರು. ಮುಂಬರುವ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ 2024ರಲ್ಲಿ ನಮ್ಮ ಗ್ರಾಮದ 18 ವರ್ಷ ಮೇಲ್ಪಟ್ಟ ಎಲ್ಲಾ ಮತದಾನ ಬಾಂಧವರು ಮತದಾನ ಮಾಡುವಂತೆ ಶಾಲಾ ವಿದ್ಯಾರ್ಥಿಗಳು ಪ್ರೇರೇಪಿಸಬೇಕು. 18 ವರ್ಷ ಮೇಲ್ಪಟ್ಟವರ ನಿಮ್ಮ ಮನೆಗಳಲ್ಲಿದ್ದರೆ ಅವರು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಮತ್ತು ಆದ್ಯತೆಯ ಮೇರೆಗೆ ಮತದಾನ ಮಾಡಬೇಕು ಎಂದು ಶಾಲಾ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ನೆರೆಹೊರೆಯ ಮನೆಯವರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಗ್ರಂಥ ಪಾಲಕಿಯಾದ ವಿದ್ಯಾ ಸರಸ್ವತಿ ರವರು ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವ ನಮ್ಮ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ವ್ಯವಸ್ಥೆಯು ಒಂದು ಪ್ರಮುಖವಾದ ಘಟ್ಟವಾಗಿದೆ. ಇದರ ಭಾಗವಾಗಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆಯ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು.. ಅದಕ್ಕಾಗಿ ನಡೆಸುತ್ತಿರುವ ಜಾಗೃತಿ ಅಭಿಯಾನದಲ್ಲಿ ನೀವೆಲ್ಲ ವಿದ್ಯಾರ್ಥಿಗಳು ಪ್ರೇರಕರಾಗಿ ಭಾಗವಹಿಸಿ ಎಂದು ತಿಳಿಸಿದರು.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
error: Content is protected !!