May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಝ ಸುಣ್ಣಲಡ್ಡ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಟಾ ಏಸ್‌ ವಾಹನದ ಒಳಗಡೆ ಸುಮಾರು ರೂ 10,000/- ಬೆಲೆ ಬಾಳುವ ನಸು ಹಳದಿ ಬಣ್ಣದ ದನಗಳು-02 ಮತ್ತು ಸುಮಾರು ರೂ 5,000/- ಬೆಲೆ ಬಾಳುವ ಕಪ್ಪು ಬಣ್ಣದ ದನ – 01 ಇದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ರೂ 15,000/- ಆಗಬಹುದು. ಸ್ವಾಧೀನಪಡಿಸಿದ ವಾಹನದ ಅಂದಾಜು ಬೆಲೆ ರೂ 1,50,000/- ಮತ್ತು ಜಾನುವಾರು ಸಾಗಾಟದ ಸಮಯ ಎ ಸ್ಕಾರ್ಟ್ ಮಾಡಿದ ಟಿವಿಎಸ್ ಜುಪಿಟರ್ ಸ್ಕೂಟರಿನ ಅಂದಾಜು ಮೌಲ್ಯ ರೂ 50,000/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ ನಂ 47 /2024 ಕಲಂ: 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಕಲಂ: 11 ಡಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!